ಚಿತ್ರ: ಆಲೆಮನೆ
ನಟರು: ಸುರೇಶ ಹೆಬ್ಳಿಕರ್, ರೂಪ ಚಕ್ರವರ್ತಿ
ಗಾಯನ: ಎಸ್ ಪಿ ಬಾಲು
ನಮ್ಮೂರ ಮಂದಾರ ಹೂವೆ ನನ್ನೊಲುಮೆ ಬಾಂದಳದ ಚೆಲುವೆ
ಬಳಿ ಬಂದು ಬಾಳನ್ನು ಬೆಳಗು ನನ್ನ ಬರಿದಾದ ಮನದಲ್ಲಿ ಮಿನುಗು
ಕಣ್ಣಲ್ಲೇ ಕರೆದು ಹೊಂಗನಸ ತೆರೆದು ಸಂಗಾತಿ ಸಂಪ್ರೀತಿ ಸೆಳೆದೆ
ಅನುರಾಗ ಹೊಳೆದು ಅನುಬಂಧ ಬೆಳೆದು ಸಮ್ಮೋಹ ಸಂಬಂಧ ಮಿಡಿದೆ
ಮೂಡಿದ ಪ್ರೇಮದ ಸೊಗಸಾದ ಕಾರಂಜಿ ಬಿರಿದೆ, ಸೊಗಸಾದ ಕಾರಂಜಿ ಬಿರಿದೆ…….
ಒಡಲಾಳ ಮೊರೆದು ಒಡನಾಟ ಮೆರೆದು ಒಡನಾಡಿ ಬಾಂಧವ್ಯ ಕಂಡೆ
ಋತುಮಾನ ಮೀರಿ ಹೊಸಗಾನ ತೋರಿ ಹಿತವಾದ ಮಾಧುರ್ಯ ಮಿಂದೆ
ತೀರದ ಮೋಹದ ಇನಿದಾದ ಆನಂದ ತಂದೆ, ಇನಿದಾದ ಆನಂದ ತಂದೆ….
Leave a Reply
You must be logged in to post a comment.