1. 1982 ರಲ್ಲಿ ಗೌಡರು ಆಲೆಮನೆ ಚಿತ್ರಕ್ಕಾಗಿ ಬರೆದ ಭಾವೈಕ್ಯ ಗೀತೆಗೆ ಸರ್ಕಾದಿಂದ ವಿಶೇಷ ಗೀತೆ ಪ್ರಶಸ್ತಿ ಹಾಗೂ ಬೆಳ್ಳಿ ಪದಕದೊಂದಿಗೆ ಸನ್ಮಾನ ದೊರೆಯಿತು. ವಿಶೇಷ ಗೀತೆ ಪ್ರಶಸ್ತಿ ಪಡೆದ ಮೊದಲ ಸಾಹಿತಿ ಕೂಡಾ ಇವರೇನೇ.

2. 1992 ರಲ್ಲಿ ಇವರು ಗಣೇಶನ ಮದುವೆ ಚಿತ್ರಕ್ಕಾಗಿ ಬರೆದ ಕಾವ್ಯಾತ್ಮಕ ಗೀತೆಗೆ ವರ್ಷದ ಶ್ರೇಷ್ಠ ಗೀತೆ ಪ್ರಶಸ್ತಿ ಹಾಗೂ ಬೆಳ್ಳಿ ಪದಕದೊಂದಿಗೆ ಸನ್ಮಾನ.

3. 1995 ರಲ್ಲಿ ಇವರ ಕಾವ್ಯ ಚಿತ್ರದ ಅತ್ಯುತ್ತಮ ಗೀತೆಗೆ ವರ್ಷದ ಶ್ರೇಷ್ಠ ಗೀತೆ ಪ್ರಶಸ್ತಿ ಹಾಗೂ ಬೆಳ್ಳಿ ಪದಕದೊಂದಿಗೆ ಸನ್ಮಾನ.

4. 1997 ರಲ್ಲಿ ಇವರು ಜನುಮದ ಜೋಡಿ ಚಿತ್ರಕ್ಕೆ ಬರೆದ ಜಾನಪದೀಯ ಗೀತೆಗೆ ವರ್ಷದ ಶ್ರೇಷ್ಠ ಗೀತೆ ಪ್ರಶಸ್ತಿ ಹಾಗೂ ಬೆಳ್ಳಿ ಪದಕದೊಂದಿಗೆ ಸನ್ಮಾನ ದೊರೆಯಿತು.

5. 1999 ರ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಮತ್ತು ಸನ್ಮಾನ.

6. 18 ಏಪ್ರಿಲ್ 2000 ರಂದು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೆಂಪೇಗೌಡ ಪ್ರಶಸ್ತಿ ದೊರೆತಿದೆ.

7. 2002 ರಲ್ಲಿ ಶ್ರವಣಬೆಳಗೊಳದ ಶ್ರೀ ಮಠದಿಂದ ವರ್ಧಮಾನ ಮಹಾವೀರ ಪ್ರಶಸ್ತಿಯನ್ನು ಪಡೆದಿದ್ದಾರೆ.

8. ನಾಡಿನ ಗೌರವಾನ್ವಿತ ಸಂಸ್ಥೆಯಾದ ಕನಾಟಕದ ರಾಜ್ಯ ಸಾಹಿತ್ಯ ಅಕಾಡೆಮಿ ರಾಜ್ಯ ಸರ್ಕಾರದಿಂದ ನೇಮಕವಾಗಿ ಎರಡು ಅವಧಿಗಳ ಕಾಲ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸ್ಥಾಯಿ ಸಮಿತಿಯ ಕ್ರಿಯಾಶೀಲ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ ಅಕಾಡೆಮಿ ಹೊರ ತರುತ್ತಿದ್ದ ಅನಿಕೇತನ ಸಾಹಿತ್ಯ ತ್ರೈಮಾಸಿಕದ ಗೌರವ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

9. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗೌರವಾನ್ವಿತ ಸದಸ್ಯರಾಗಿ ( ಸರ್ಕಾರದಿಂದ ನೇಮಕ ) ಅನನ್ಯ ಅನುಭವ ಪಡೆದಿದ್ದಾರೆ.ಬೃಹತ್ ಬೆಂಗಳೂರು ನಗರದಲ್ಲಿ ಕನ್ನಡ ಫಲಕಗಳು ಮಿನುಗಿ ಮಿಂಚಲು ಸಾಕಷ್ಟು ಶ್ರಮಿಸಿದ್ದಾರೆ.